ಭಾನುವಾರ ದಾಖಲಾದ ಕೊರೋನಾ ಸೋಂಕಿತರ ಸಂಖ್ಯೆ ಎಷ್ಟು ಗೊತ್ತಾ..? ಇಲ್ಲಿದೆ ಸಂಪೂರ್ಣ ಮಾಹಿತಿ

Soma shekhar

ಕೊರೋನಾ ರಾಜ್ಯದಲ್ಲಿ ಪ್ರತಿನಿತ್ಯವೂ ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಖಲೆದ ಮೂರ್ನಾಲ್ಕು ದಿನಗಳಿಂದ ರಾಜ್ಯದಲ್ಲಿ ಕೊರೋನಾ ವಯರಸ್ ನಾಲ್ಕು ಸಾವುರದ ಗಡಿಯನ್ನು ದಾಟುತ್ತಿದೆ, ಇದರ ಜೊತೆಗೆ ಸಾವಿನ ಸಂಖ್ಯೆಯೂ ಕೂಡ ದಿನನಿತ್ಯ ಏರಿಕೆಯಾಗುತ್ತಿದೆ. ಅಷ್ಟಕ್ಕೂ ಇಂದು ದಾಖಲಾದ ಕೊರೋನಾ ಸೋಂಕಿತರ ಸಂಖ್ಯೆ ಎಷ್ಟು ಗೊತ್ತಾ,,?

 

ಶನಿವಾರ ಸಾಯಂಕಾಲದಿಂದ ಭಾನುವಾರ ಸಾಯಂಕಾಲದವರೆಗಿನ ಕೋವಿಡ್ 19 ಪ್ರಕರಣಗಳ ವರದಿಯ ಪ್ರಕಾರ ರಾಜ್ಯದಲ್ಲಿ ಈ 24 ಗಂಟೆಗಳ ಅವಧಿಯಲ್ಲಿ ಒಟ್ಟು 4120 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ. ಲಭ್ಯ ವರದಿಗಳ ಪ್ರಕಾರ ಈ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 1290 ಕೋವಿಡ್ 19 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಇಂದು ರಾಜ್ಯದಲ್ಲಿ ಕೋವಿಡ್ 19 ಸಂಬಂಧಿತ ಒಟ್ಟು 91 ಸಾವು ಸಂಭವಿಸಿದೆ.

 

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಇಂದೂ ಸಹ ಎರಡು ಸಾವಿರದ ಗಡಿ ದಾಟಿದ್ದು, ಇಂದು ಇಲ್ಲಿ 2156 ಸೋಂಕಿತರು ಪತ್ತೆಯಾಗಿದ್ದಾರೆ. ಆ ಬಳಿಕದ ಸ್ಥಾನದಲ್ಲಿ ದಕ್ಷಿಣ ಕನ್ನಡ (285), ವಿಜಯಪುರ (171), ಚಿಕ್ಕಬಳ್ಳಾಪುರ (135), ಉಡುಪಿ (134), ಧಾರವಾಡ (126), ಮೈಸೂರು (110) ಹಾಗೂ ಶಿವಮೊಗ್ಗ (104) ಜಿಲ್ಲೆಗಳಿವೆ.

 

ಇಂದು ರಾಜ್ಯದಲ್ಲಿ ಕೋವಿಡ್ 19 ಸೋಂಕಿಗೆ ಒಟ್ಟು 91 ಜನ ಬಲಿಯಾಗಿದ್ದಾರೆ. ಮೂಲಕ ರಾಜ್ಯದಲ್ಲಿ ಇದುವರೆಗೆ ಮಹಾಮಾರಿಗೆ ಬಲಿಯಾದವರ ಒಟ್ಟು ಸಂಖ್ಯೆ 1331ಕ್ಕೆ ಏರಿಕೆ ಆಗಿದೆ. ಇಂದು ರಾಜ್ಯಾದ್ಯಂತ ಒಟ್ಟು 1290 ಕೋವಿಡ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 63772 ಕೋವಿಡ್ 19 ಸೋಂಕು ಪ್ರಕರಣಗಳು ದಾಖಲುಗೊಂಡಿದೆ. ಮತ್ತು ಇವರಲ್ಲಿ 23065 ಸೋಂಕಿತರು ಗುಣಮುಖರಾಗಿದ್ದಾರೆ ಹಾಗೂ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 39370 ಇದೆ.

 

ಮೂಲಕ ರಾಜ್ಯದಲ್ಲಿ ಕೋವಿಡ್ 19 ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ ಸಾವಿರದ ಗಡಿ ದಾಟಿದ್ದು ಇಲ್ಲಿಯವರೆಗೆ 1331 ಸಾವು ಸಂಭವಿಸಿದೆ. ಹಾಗೂ 06 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 579 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

 

ಬೆಂಗಳೂರು ನಗರ ಜಿಲ್ಲೆಯಲ್ಲಿ 2156 ಪಾಸಿಟಿವ್ ಪ್ರಕರಣ ಸೇರಿದಂತೆ, ದಕ್ಷಿಣ ಕನ್ನಡ - 285, ವಿಜಯಪುರ 171, ಚಿಕ್ಕಬಳ್ಳಾಪುರ - 135, ಉಡುಪಿ - 134, ಧಾರವಾಡ - 126, ಮೈಸೂರು - 110 ಮತ್ತು ಶಿವಮೊಗ್ಗ - 104 ಜಿಲ್ಲೆಗಳಲ್ಲಿ ಮೂರಂಕಿಯ ಕೋವಿಡ್ 19 ಪ್ರಕರಣಗಳು ದಾಖಲಾಗಿದ್ದರೆ, ಬೆಳಗಾವಿ - 87, ಬಳ್ಳಾರಿ - 73, ಬೆಂಗಳೂರು ಗ್ರಾಮಾಂತರ - 70, ಕಲಬುರಗಿ - 69, ಉತ್ತರ ಕನ್ನಡ - 69, ದಾವಣಗೆರೆ - 62, ಬಾಗಲಕೋಟೆ - 60, ಹಾವೇರಿ - 54, ಬೀದರ್ - 45, ಹಾಸನ - 43, ಚಿಕ್ಕಮಗಳೂರು - 41, ರಾಯಚೂರು - 32, ಗದಗ - 30, ರಾಮನಗರ - 29, ಕೋಲಾರ - 25, ಚಾಮರಾಜನಗರ - 25, ತುಮಕೂರು - 19, ಕೊಪ್ಪಳ - 19, ಚಿತ್ರದುರ್ಗ - 17, ಕೊಡಗು - 13 ಮತ್ತು ಯಾದಗಿರಿ - 10 ಸೇರಿದಂತೆ ರಾಜ್ಯದ ಒಟ್ಟು 28 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

 

Find Out More:

Related Articles: