‘ಮುಂದುವರೆದ ಅಧ್ಯಾಯ’ ನಿಂತಿದ್ದೇಕೆ!?

somashekhar
ಅರೇ ಏನಿದು ಮುಂದುವರೆದ ಅಧ್ಯಾಯ ಅಂತ ಕನ್ಫಫ್ಯೂಸ್ ಆಯ್ತಾ. ಚಿಂತಿಸಬೇಡಿ ಅದೇನಂತ ನಾವ್ ಹೇಳ್ತೀವಿ ನೋಡಿ.   ಸ್ಯಾಂಡಲ್ ವುಡ್ ನಲ್ಲಿ ಭಾರೀ ನಿರೀಕ್ಷೆ ಮೂಡಿಸಿದ ಚಿತ್ರವೇ ಮುಂದುವರೆದ ಅಧ್ಯಾಯ.  ಚಿತ್ರ ಓ ಕೆ ಆದರೆ ಇದೀಗ ನಿಂತಿದ್ದೇಕೆ? ಎಂಬ ಪ್ರಶ್ನೆ ಇದೀಗ ಎಲ್ಲರನ್ನು ಕಾಡುತ್ತಿದೆ. ಇದಕ್ಕೆಲ್ಲ ಉತ್ತರ ಇಲ್ಲಿದೆ ನೋಡಿ. 

ಸ್ಯಾಂಡಲ್ ವುಡ್ ನ ಕಣಜ ಎಂಟರ್ ಪ್ರೈಸಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ಆದಿತ್ಯ ನಟರಾಗಿ ಕಾಣಿಸಿಕೊಳ್ಳುತ್ತಿರುವ ‘ಮುಂದುವರೆದ ಅಧ್ಯಾಯ’ ಚಿತ್ರಕ್ಕೆ ಕಂಠೀರವ ಸ್ಟುಡಿಯೋದಲ್ಲಿ ಕ್ಲೈಮ್ಯಾಕ್ಸ್ ಭಾಗ ಚಿತ್ರಿಸಿಕೊಳ್ಳುವುದರೊಂದಿಗೆ ಚಿತ್ರೀಕರಣ ಮುಕ್ತಾಯಗೊಂಡಿದೆ. ಆದಿತ್ಯ, ಆಶಿಕ, ಸಂದೀಪ್ ಕುಮಾರ್, ಚಂದನ ಹಾಗೂ ಟೆಲಿವಿಷನ್  ಕಾರ್ಯಕ್ರಮ ನಿರೂಪಕರಾದ ಭಾವನ, ನಾಗೇಂದ್ರಬಾಬು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಕಂಠೀರವ ಸ್ಟುಡಿಯೋದಲ್ಲಿರುವ ರೆಬಲ್‍ಸ್ಟಾರ್ ಅಂಬರೀಶ್ ಅವರ ಸಮಾಧಿಗೆ ತೆರಳಿ ಆಶೀರ್ವಾದ ಪಡೆದ ನಂತರ ಕುಂಬಳಕಾಯಿ ಒಡೆಯುವುದರೊಂದಿಗೆ ಚಿತ್ರದ ಚಿತ್ರೀಕರಣ ಪೂರ್ಣಗೊಳಿಸಲಾಗಿದೆ. ಚಿತ್ರಕ್ಕೆ 50 ದಿನಗಳ ಕಾಲ ಬೆಂಗಳೂರು, ದೇವರಾಯನದುರ್ಗ, ಮಳವಳ್ಳಿ, ಮಾಗಡಿ ಮುಂತಾದ ಕಡೆ ಚಿತ್ರೀಕರಣ ನಡೆಸಲಾಗಿದೆ.

ತುಂಬಾ ವಿಭಿನ್ನತೆಯ ಕಥಾ ಹಂದರ ಹೊಂದಿರುವ ಈ ಚಿತ್ರವನ್ನು ಬಾಲು ಚಂದ್ರಶೇಖರ್ ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ನಿರ್ದೇಶಕರೇ ಬರೆದಿದ್ದಾರೆ. ಆದ್ದರಿಂದ ಚಿತ್ರದಲ್ಲಿ ಎಲ್ಲವನ್ನು ಒಂದು ಹಂತಕ್ಕೆ ತರಲಾಗಿದೆ. ಚಿತ್ರ ಅದ್ಭುತವಾಗಿ ಮೂಡಿಬಂದಿದೆ ಯಂತೆ. ಜಾನಿ-ನಿತಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಜಯಂತ ಕಾಯ್ಕಿಣಿ ಬರೆದಿದ್ದಾರೆ. ಅನೂಪ್ ಸೀಳಿನ್ ಹಿನ್ನಲೆ ಸಂಗೀತ ನೀಡಿದ್ದಾರೆ. ದಿಲೀಪ್ ಚಕ್ರವರ್ತಿ ಛಾಯಾಗ್ರಹಣ, ಶ್ರೀಕಾಂತ್ ಸಂಕಲನ ಹಾಗೂ ವಿನೋದ್ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಸ್ಟಾರ್ ನಟ ಆದಿತ್ಯ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ತಾರಾಬಳಗದಲ್ಲಿ ಅಜೇಯ್ ರಾವ್, ಸಂದೀಪ್ ಕುಮಾರ್, ಆಶಿಕಾ ಸೋಮಶೇಖರ್, ಚಂದನ, ಮುಖ್ಯಮಂತ್ರಿ ಚಂದ್ರು, ಜೈಜಗದೀಶ್, ಭಾಸ್ಕರ್ ಸೂರ್ಯ, ವಿನೋದ್, ಶಕ್ತಿ ಸೋಮಣ್ಣ ಮುಂತಾದವರಿದ್ದಾರೆ. ಚಿತ್ರದಲ್ಲಿ ದೊಡ್ಡ ತಾರಾಗಣ ಹೊಂದಿರುವುದರಿಂದ ಸಿನಿ ಪ್ರಿಯರ ನಿರೀಕ್ಷೆಗಳು ಹೆಚ್ಚಿವೆ.




Find Out More:

Related Articles: