ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಚಿತ್ರದಲ್ಲಿ ಸುದೀಪ್ ಗೆ ಬಂಪರ್ ಆಫರ್

Soma shekhar
ಬೆಂಗಳೂರು: ಟಾಲಿವುಡ್‍ ಅನ್ನು ಪ್ರಪಂಚಕ್ಕೆ ಪರಿಚಯಿಸಿದ, ಬಾಹುಬಲಿ ಅಂತಹ ನಾ ಭೂತೋ ನಾ ಭವಿಷ್ಯತ್ ಎನ್ನುವ ಚಿತ್ರ ನೀಡಿದ ಖ್ಯಾತ ನಿರ್ದೇಶಕ ಕನ್ನಡಿಗ ರಾಜಮೌಳಿ ಅವರು ತಮ್ಮ ನಿರ್ದೇಶನದ ಸಿನಿಮಾದಲ್ಲಿ ಮತ್ತೊಮ್ಮೆ ಸ್ಯಾಂಡಲ್ ವುಡ್ ನ ನಟ ಚಕ್ರವರ್ತಿ ಸುದೀಪ್ ಅವರಿಗೆ ಬಂಪರ್ ಆಫರ್ ನೀಡಿದ್ದಾರೆ ಎಂದು ತಿಳಿದು ಬಂದಿದೆ.
 
ಸ್ಯಾಂಡಲ್ ವುಡ್ ಸ್ಟಾರ್ ನಟ ಕಿಚ್ಚ ಸುದೀಪ್ ಈ ಹಿಂದೆ ತೆಲುಗಿನ ಬ್ಲಾಗ್ ಬಸ್ಟರ್ ಹಿಟ್ ಸಿನಿಮಾ ‘ಬಾಹುಬಲಿ’ ಸಿನಿಮಾದಲ್ಲಿ ಅಸ್ಲಾಂ ಖಾನ್ ಎಂಬ ಶಸ್ತ್ರಾಸ್ತ್ರ ವ್ಯಾಪಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಚಿತ್ರದಲ್ಲಿ ಇವರ ಪಾತ್ರ ಕೆಲವೇ ನಿಮಿಷ ಇದ್ದರೂ, ಬಹಳ ಉತ್ತಮವಾಗಿ ಮೂಡಿ ಬಂದಿತ್ತು. ಕರ್ನಾಟಕದಲ್ಲಿ ಚಿತ್ರ ಭಾರೀ ಹಿಟ್ ಆಗಲು ಅದು ಕೂಡ ಒಂದು ಕಾರಣವಾಗಿತ್ತು.
 
ಇದರ ಹಿಂದೆ ನಾನು ಹೀರೋ ಆಗಿದ್ದ ಈಗ ಚಿತ್ರದಲ್ಲಿ ಸುದೀಪ್ ವಿಲನ್ ಆಗಿ ಮಿಂಚಿದ್ದರು. ಇದೀಗ ರಾಜಮೌಳಿ ನಿರ್ದೇಶನದ ಸಿನಿಮಾದಲ್ಲಿ ಮತ್ತೆ ಸುದೀಪ್ ಅಭಿನಯಿಸುವ ಸಾಧ್ಯತೆ ಇದೆ. ಸದ್ಯಕ್ಕೆ ರಾಜಮೌಳಿ ಅವರು ‘ಆರ್‌ ಆರ್‌ ಆರ್’ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಜೂನಿಯರ್ ಎನ್‍ ಟಿ ಆರ್ ಮತ್ತು ರಾಮ್ ಚರಣ್ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇದೇ ಸಿನಿಮಾದಲ್ಲಿ ಸುದೀಪ್ ಅಭಿನಯಿಸಲು ರಾಜಮೌಳಿ ಆಫರ್ ಕೊಟ್ಟಿದ್ದಾರೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹಹರಿದಾಡುತ್ತಿದೆ. 
 
ಆರ್‌.ಆರ್‌.ಆರ್ ಸಿನಿಮಾದಲ್ಲಿ ಸುದೀಪ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಅಭಿನಯಿಸುವ ಸಾಧ್ಯತೆಗಳಿವೆ. ಯಾಕೆಂದರೆ ಈ ಸಿನಿಮಾದಲ್ಲಿ ಇದು ತುಂಬಾ ಮುಖ್ಯವಾದ ಪಾತ್ರವಾಗಿದೆ. ಹೀಗಾಗಿ ಈ ಪಾತ್ರವನ್ನು ಸುದೀಪ್ ಅವರಿಂದಲೇ ಮಾಡಿಸಬೇಕೆಂದು ಚಿತ್ರತಂಡ ಪ್ಲಾನ್ ಮಾಡಿಯಂತೆ. ಆದರೆ ಚಿತ್ರತಂಡದಿಂದ ಇನ್ನೂ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ. ಸದ್ಯಕ್ಕೆ ಸುದೀಪ್ ‘ಕೋಟಿಗೊಬ್ಬ 3’ ಸಿನಿಮಾದ ಶೂಟಿಂಗ್‍ನಲ್ಲಿ ಬ್ಯುಸಿಯಿದ್ದಾರೆ. ಇತ್ತೀಚೆಗಷ್ಟೆ ಈ ಸಿನಿಮಾ ಮೊದಲ ಮೋಷನ್ ಪೋಸ್ಟರ್ ಬಿಡುಗಡೆಯಾಗಿತ್ತು. ಸುದೀಪ್ ಬಿಗ್ ಬಾಸ್ ಆಕರಿಂಗ್ ಸಹ ಮಾಡುತ್ತಿದ್ದು, ಫುಲ್ ಬ್ಯೂಸಿಯಾಗಿದ್ದಾರೆ.

Find Out More:

Related Articles: