ಪ್ರಧಾನಿ ಮೋದಿಗೆ ಸಲಹೆ ನೀಡಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ : ಅಷ್ಟಕ್ಕೂ ಆ ಸಲಹೆ ಏನು..?

Soma shekhar

ಭಾರತದ ಲಡಾಕ್ ನ ಗಲ್ವಾನ್ ಕಣಿವೆ ಪ್ರದೇಶದಲ್ಲಿ ನಡೆಯುತ್ತಿರುವ ಚೀನಾ ನಡುವಿನ ಸಂಕರ್ಷದಿಂದಾಗಿ ಭಾರತದ 20 ಯೋಧರ ಹುತಾತ್ಮರಾಗಿದ್ದಾರೆ. ಇದಕ್ಕೆ ತಕ್ಕ ಪ್ರತಿಕ್ರಯಿಯನ್ನು ನೀಡುವುದಾಗೊ ಪ್ರಧಾನಿ ಮೋದಿ ತಿಳಿಸಿದ್ದಾರೆ. ಈ ಕುರಿತು ಪ್ರಧಾನಿ ಮೋದಿ ಸರ್ವ ಪಕ್ಷಗಳಗಳ ಸಭೆಯನ್ನು ಕರೆದಿತ್ತು. ಈ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರೆಶ್ನೆಗಳ ಸುರಿಮಳೆಯನ್ನೇ ಹರಿಸಿದ್ದರು. ಆದರೆ ಈಗ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪ್ರಧಾನಿ ಮೋದಿಗೆ ಸಲಹೆಯೊಂದನ್ನು ನೀಡಿದ್ದಾರೆ. ಅಷ್ಟಕ್ಕೂ ಪ್ರಧಾನಿ ಮೋದಿಗೆ ಮನಮೋಹನ್ ಸಿಂಗ್ ನೀಡಿದ ಸಲಹೆ ಏನು ಗೊತ್ತಾ..?

 

ಪ್ರಧಾನಿ ಸ್ಥಾನದಲ್ಲಿರುವವರು ತಾವು ಬಳಸುವ ಪದಗಳ ಪರಿಣಾಮಗಳ ಬಗ್ಗೆ ಯೋಚಿಸಬೇಕು' ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೋಮವಾರ ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿ‌ ಸಲಹೆ ಮಾಡಿದ್ದಾರೆ.

 

ಲಡಾಖ್ ಬಿಕ್ಕಟ್ಟು ಕುರಿತಂತೆ ಇದೇ ಮೊದಲ ಬಾರಿಗೆ ಮೌನ ಮುರಿದಿರುವ ಮಾಜಿ ಪ್ರಧಾನಿ, 'ಕರ್ನಲ್ ಬಿ.ಸಂತೋಷ್ ಬಾಬು ಮತ್ತು ನಮ್ಮ ಯೋಧರ ಬಲಿದಾನಕ್ಕೆ ನ್ಯಾಯ ಒದಗಿಸಲು ಸರ್ಕಾರ ಶ್ರಮಿಸಬೇಕು. ನಮ್ಮ ದೇಶದ ಸಾರ್ವಭೌಮತೆ ಕಾಪಾಡಲು ನಮ್ಮ ಯೋಧರು ಮಾಡಿರುವ ಅಪ್ರತಿಮ ತ್ಯಾಗ ವ್ಯರ್ಥವಾಗಬಾರದು' ಎಂದು ಹೇಳಿದ್ದಾರೆ.

 

'ಈ ವಿಚಾರವನ್ನು ಸರ್ಕಾರ ಕಡೆಗಣಿಸಬಾರದು. ಹಾಗೆ ಮಾಡಿದರೆ ಜನರು ಸರ್ಕಾರದ ಮೇಲೆ ಇರಿಸಿರುವ ನಂಬಿಕೆಗೆ ಧಕ್ಕೆ ಒದಗಿದಂತೆ ಆಗುತ್ತದೆ' 'ಈ ಕ್ಷಣದಲ್ಲಿ ನಾವು ಐತಿಹಾಸಿಕ ಕವಲು ದಾರಿಯಲ್ಲಿ ನಿಂತಿದ್ದೇವೆ. ನಮ್ಮ ಸರ್ಕಾರ ಈಗ ತೆಗೆದುಕೊಳ್ಳುವ ನಿರ್ಧಾರಗಳನ್ನು ಮುಂದಿನ ತಲೆಮಾರು ಪರಿಶೀಲಿಸುತ್ತದೆ. ಮುಂದಿನ ತಲೆಮಾರು ನಮ್ಮನ್ನು ಹೇಗೆ ಅರ್ಥೈಸಿಕೊಳ್ಳಲಿದೆ ಎಂಬುದನ್ನು ಗಮನದಲ್ಲಿರಿಸಿಕೊಂಡು ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು.

 

 ನಮ್ಮ ಪ್ರಜಾಪ್ರಭುತ್ವವು ಈ ಜವಾಬ್ದಾರಿಯನ್ನು ಪ್ರಧಾನ ಮಂತ್ರಿ ಕಚೇರಿಗೆ ನೀಡಿದೆ. ತಾವು ಬಳಸುವ ಪದಗಳ ಪರಿಣಾಮಗಳ ಬಗ್ಗೆ ಪ್ರಧಾನಿ ಯೋಚಿಸಬೇಕು. ರಾಷ್ಟ್ರೀಯ ಭದ್ರತೆ, ಕಾರ್ಯತಂತ್ರ ಮತ್ತು ಪ್ರಾದೇಶಿಕ ಹಿತಾಸಕ್ತಿಗಳಿಗೆ ಅವರು ನೀಡುವ ಹೇಳಿಕೆಗಳಿಂದ ಧಕ್ಕೆಯಾಗಬಾರದು' ಎಂದು ಮನಮೋಹನ್ ಸಿಂಗ್ ಸಲಹೆ ಮಾಡಿದ್ದಾರೆ.

 

'ಚೀನಾ ಪ್ರಚೋದನಾಕಾರಿಯಾಗಿ ವರ್ತಿಸುತ್ತಿದೆ. ಗಲ್ವಾನ್ ಕಣಿವೆ ಮತ್ತು ಪಾನ್‌ಗೊಂಗ್ ತ್ಸೊ ಸರೋವರದ ಆಸುಪಾಸಿನಲ್ಲಿ ಭಾರತಕ್ಕೆ ಸೇರಿದ ಭೂಪ್ರದೇಶಗಳನ್ನು ಅಕ್ರಮವಾಗಿ ತನ್ನದೆಂದು ವಾದಿಸುತ್ತಿದೆ. ನಾವು ಬೆದರಿಕೆಗಳಿಗೆ ಮಣಿಯುವ ಪ್ರಶ್ನೆಯೇ ಇಲ್ಲ. ಹಲ್ಲೆಕೋರ ಮನಸ್ಥಿತಿಗೆ ಬೆದರಿ ಹಿಂಜರಿಯುವುದೂ ಸಲ್ಲದು' ಎಂದು ಎಚ್ಚರಿಸಿದ್ದಾರೆ.

 

'ಪ್ರಧಾನಿ ಬಳಸಿದ ಪದಗಳು ಎದುರಾಳಿಗಳಿಗೆ ಅಸ್ತ್ರದಂತೆ ಸಿಗಬಾರದು. ತಪ್ಪು ಮಾಹಿತಿ ನೀಡುವುದು ರಾಜತಾಂತ್ರಿಕ ನಡೆ ಅಥವಾ ಖಡಕ್ ನಾಯಕತ್ವಕ್ಕೆ ಪರ್ಯಾಯವಾಗಲಾರದು. ಸರ್ಕಾರದ ಎಲ್ಲ ಅಂಗಗಳು ಪರಸ್ಪರ ಸಮನ್ವಯದಿಂದ ಕೆಲಸ ಮಾಡಿ, ಉದ್ವಿಗ್ನ ಸ್ಥಿತಿ ಮತ್ತಷ್ಟು ಬಿಗಡಾಯಿಸದಂತೆ ಸರ್ಕಾರ ಎಚ್ಚರವಹಿಸಬೇಕು' ಎಂದು ಸಿಂಗ್ ಸಲಹೆ ಮಾಡಿದ್ದಾರೆ.

 

Find Out More:

Related Articles: