'ಮುಂಗಾರು ಹಂಗಾಮಿನಲ್ಲಿ ರೈತರಿಗೆ ಸಮಸ್ಯೆ ಆಗಬಾರದು'

frame 'ಮುಂಗಾರು ಹಂಗಾಮಿನಲ್ಲಿ ರೈತರಿಗೆ ಸಮಸ್ಯೆ ಆಗಬಾರದು'

somashekhar

'ಮುಂಗಾರು ಹಂಗಾಮಿನಲ್ಲಿ ರೈತರಿಗೆ ಸಮಸ್ಯೆ ಆಗಬಾರದು. ಅವರಿಗೆ ಯಾವುದೇ ಸಮಸ್ಯೆ ಆಗದಂತೆ ಎಚ್ಚರ ವಹಿಸಿ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜಿಲ್ಲಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಈ ಕುರಿತು ಮತ್ತಷ್ಟು ಮಾಹಿತಿ ಇಲ್ಲಿದೆ. 

 

ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ, ಬರ ನಿರ್ವಹಣೆ ಸಂಬಂಧ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ‌ ಕುಮಾರಸ್ವಾಮಿ ಪ್ರತಿ ಜಿಲ್ಲಾ ಕೇಂದ್ರದಲ್ಲಿ ಬಿತ್ತನೆ ಬೀಜ ಸಂಗ್ರಹ ಮಾಡಬೇಕು. ರೈತರಿಗೆ ಯಾವುದೇ ರೀತಿ ಸಮಸ್ಯೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎಂದು ಸಿಎಂ ಹೇಳಿದ್ದಾರೆ. 

 

ಜನರಿಗೆ ಕುಡಿಯುವ ನೀರಿನ ಸಮಸ್ಯೆ ಆಗಲೇಬಾರದು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ನೀರಿನ ಸಮಸ್ಯೆ ಇದ್ದರೆ ಖಾಸಗಿಯವರ ಬಳಿ ಒಡೆದುಕೊಳ್ಳಿ. ಅದಕ್ಕೆ ಅಗತ್ಯ ಇರುವಷ್ಟು ಹಣವನ್ನು ಸರ್ಕಾರ ಕೊಡುತ್ತದೆ ಎಂದರು. 

Find Out More:

Related Articles:

Unable to Load More