ಯಡಿಯೂರಪ್ಪ ಸಿಎಂ ಕನಸು ನನಸಾಗಲ್ವ?

somashekhar
ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸೋ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸೋಕೆ ಬಿಜೆಪಿಯ ರಾಜ್ಯಾಧ್ಯಕ್ಷ ಬಿ,ಎಸ್,ಯಡಿಯೂರಪ್ಪ ಅವರು ಹೊಸದಿಲ್ಲಿಗೆ ಬರುವ ಅಗತ್ಯವೇ ಇಲ್ಲ ಎಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಸೂಚನೆ ನೀಡಿದ್ದಾರೆ.


ಒಂದು ವೇಳೆ ಈ ತಿಂಗಳ ಅಂತ್ಯದಲ್ಲಿ ಸರ್ಕಾರ ರಚನೆ ಆಗದೇ ಇದ್ದರೆ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಬರಲಿದೆ. ನಂತರ ಆರು ತಿಂಗಳಲ್ಲಿ ಸಹಜವಾಗಿಯೇ ಸಾರ್ವತ್ರಿಕ ಚುನಾವಣೆ ನಡೆದು, ಬಿಜೆಪಿಗೆ ಸ್ಪಷ್ಟ ಬಹುಮತ ಬರಬಹುದು ಅನ್ನೋದು ಕೇಂದ್ರ ನಾಯಕರ ಲೆಕ್ಕಾಚಾರವಾಗಿದೆ.


ಅಲ್ಲದೇ ಈ ಆರು ತಿಂಗಳ ಅವಧಿಯಲ್ಲಿ ಯಡಿಯೂರಪ್ಪ ಅವರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಿ, ಹೊಸ ನಾಯಕನ ನೇತೃತ್ವದಲ್ಲಿ ಚುನಾವಣೆ ಎದುರಿಸಿ ಸರ್ಕಾರ ರಚನೆ ಮಾಡೋಕೆ ಅಮಿತ್ ಶಾ ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡದೇ ಇರೋದಕ್ಕೆ ಅವರ ವಯಸ್ಸೇ ಅಡ್ಡಿಯಾಗಿದೆ ಎನ್ನಲಾಗುತ್ತಿದೆ.


Find Out More:

Related Articles: