ಕೇಂದ್ರ ಸರ್ಕಾರ 20ಲಕ್ಷ ಕೋಟಿ ಘೋಷಿಸಿರುವ ಬಗ್ಗೆ ಕರ್ನಾಟಕದ ಮಾಜಿ ಮುಖ್ಯ ಮಂತ್ರಿ ಎಚ್ ಡಿ ಕುಮಾರ ಸ್ವಾಮಿ ಏನು ಹೇಳಿದ್ದಾರೆ ಗೊತ್ತಾ..?

Soma shekhar

ಕೊರೋನ ವೈರಸ್ ಇಂದಾಗಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟನ್ನು ಸರಿದೂಗಿಸುವ ಸಲುವಾಗಿ ಕೇಂದ್ರ ಸರ್ಕಾರದಿಂದ 20ಲಕ್ಷ ಕೋಟಿ ಪ್ಯಾಕೇಜ್ ಅನ್ನು ಘೋಷಣೆಯನ್ನು ಮಾಡಲಾಗಿದೆ. ಇದರಿಂದಾಗಿ ದೇಶದ ಜನರಿಗೆ ಕೊರೋನಾ ಬಿಕ್ಕಟ್ಟಿನಲ್ಲಿ ನೆರವಾಗುತ್ತದೆ ಎಂಬ ನೀರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ ಆದರೂ ಕೆಲವು ನಾಯಕರು ಕೇಂದ್ರ ಸರ್ಕಾರದ ಈ ಪ್ಯಾಕೇಜ್ ಗೆ ಪರವಿರೋಧ ವ್ಯಕ್ತವಾಗುತ್ತಿದೆ.

 

ಭಾರತದ ಬಿಕ್ಕಟ್ಟನ್ನು ಅವಕಾಶವಾಗಿ ಪರಿವರ್ತಿಸಿಕೊಂಡಿದೆ ಎಂದೂ, ದೇಶ ಸ್ವಾವಲಂಭಿ ಭಾರತವಾಗಬೇಕು. ಆತ್ಮನಿರ್ಭಾರತ್ ಆಗಬೇಕು ಎಂದು ಮೋದಿ ನಿನ್ನೆಯ ಭಾಷಣದಲ್ಲಿ ಹೇಳಿದ್ದರು. ಅದರಂತೇ ಬಿಕ್ಕಟ್ಟನ್ನು ಬಿಜೆಪಿ ರಾಜಕೀಯದ ಅವಕಾಶವಾಗಿಸಿಕೊಂಡಿದೆ ಆತ್ಮನಿರ್ಭಾರತ್ ಎಂಬ ಆಕರ್ಷಕ ಪದಗುಚ್ಛದ ಮೂಲಕ ದೇಶದ ಜನ ಸ್ವಾವಲಂಬಿಗಳಾಗಬೇಕು ಎಂದು ಹೇಳಿ ಅನಾಥರನ್ನಾಗಿಸಲಾಗಿದೆ ಎಂದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್ ಗಳ ಮೂಲಕ ಟೀಕಿಸಿದ್ದಾರೆ.

 

ಲಾಕ್ ಡೌನ್ ನಿಂದ ತತ್ತರಿಸಿರುವ ಜನರನ್ನು, ರೈತರನ್ನು, ಬಡವರನ್ನು ಪಕ್ಕಕ್ಕಿಟ್ಟು, ಉದ್ಯಮಿಗಳು, ಉದ್ಯಮಗಳ ವ್ಯವಹಾರಕ್ಕೆ ಈ 20 ಲಕ್ಷ ಕೋಟಿ ರೂ ಪ್ಯಾಕೇಜ್ ರೂಪಿಸಿರುವುದು ಕೇಂದ್ರ ಹಣಕಾಸು ಸಚಿವರ ವಿವರಣೆಯಲ್ಲಿ ಸ್ಪಷ್ಟವಾಗಿದೆ. ಆದರೆ ಪ್ಯಾಕೇಜ್ ನಲ್ಲಿ ತಮಗೂ ಒಂದಿಷ್ಟು ಸಿಗಬಹುದು ಎಂದು ನಿರೀಕ್ಷಿಸಿದ್ದ ಜನರ ನಿರೀಕ್ಷೆಗಳಿಗೆ ತಣ್ಣೀರೆರಚಲಾಗಿದೆ. ಕೇವಲ ಘೋಷಣೆಗಳ ಮೂಲಕ, ಕಾಲ್ಪನಿಕ ಲೆಕ್ಕಾಚಾರಗಳ ಮೂಲಕ 20 ಲಕ್ಷ ಕೋಟಿ ರೂ ಪ್ಯಾಕೇಜ್ ಎಂಬ ಅರಗಿನ ಅರಮನೆ ಕಟ್ಟಿರುವ ಕೇಂದ್ರ ಸರ್ಕಾರ ಆ ಮೂಲಕ ಜನರ ದುಸ್ಥಿತಿಯನ್ನು ಗೇಲಿ ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

 

ಈ ಘೋಷಣೆಯ ಮೂಲಕ ಅಪಾರ ಪ್ರಮಾಣದ ಪ್ರಚಾರ ಪಡೆದಿರುವ ಬಿಜೆಪಿ, ದೇಶದ ಬಿಕ್ಕಟ್ಟನ್ನು ರಾಜಕೀಯದ ಅವಕಾಶವಾಗಿ ಪರಿವರ್ತಿಸಿಕೊಂಡಿರುವುದು ಸ್ಪಷ್ಟ ಎಂದಿದ್ದಾರೆ.

 

ಕೊರೊನಾ ವೈರಸ್ ನಿಂದ ಸೃಷ್ಟಿಯಾಗಿರುವ ಬಿಕ್ಕಟ್ಟನ್ನು ಎದುರಿಸಲು ರಾಜ್ಯಗಳಿಗೆ ಕೇಂದ್ರ ಸರ್ಕಾರ ಅಗತ್ಯ ನೆರವು ನೀಡಬೇಕಿತ್ತು. ಆದರೆ ತನಿಗಿಷ್ಟ ಬಂದ ಘೋಷಣೆಗಳನ್ನು ಕೂಗಿ 20 ಲಕ್ಷ ಕೋಟಿ ರೂ ಕೊಟ್ಟೆವೆಂದು ಕೇಂದ್ರ ತನ್ನ ಬೆನ್ನು ತಟ್ಟಿಕೊಳ್ಳುತ್ತಿದೆ ಎಂದು ಟೀಕಿಸಿದಗದಾರೆ.

ರಾಜ್ಯಗಳನ್ನು ಅಕ್ಷರಶಃ ಭಿಕ್ಷಾಪಾತ್ರೆ ಹಿಡಿದು ನಿಲ್ಲುವಂತೆ ಮಾಡಿದೆ. 20 ಲಕ್ಷ ಕೋಟಿ ರೂ ಪ್ಯಾಕೇಜ್ ಎಂಬುದು ಲಿಕ್ವಿಡಿಟಿ(ನಗದು) ಆಧಾರಿತವಲ್ಲ. ಇದರಿಂದ ಜನರಿಗೆ ಕನಿಷ್ಠ ಸಹಾಯವೂ ಆಗದು. ಇದು ಕಾಲ್ಪನಿಕ ಘೋಷಣೆಗಳು ಮಾತ್ರ. ಇದರಲ್ಲಿರುವುದು ಉದ್ಯಮ, ಉದ್ಯಮಿಗಳಷ್ಟೇ. ಆತ್ಮನಿರ್ಭಾರತ್ ಎಂಬುದು ನಿಮಗೆ ನೀವೇ ಆಗಬೇಕು. ನಮ್ಮಿಂದ ನಿಮಗೆ ಚಿಕ್ಕಾಸೂ ದೊರಕದು ಎಂದು ಜನರಿಗೆ ಕೇಂದ್ರ ನೀಡಿದ ಸ್ಪಷ್ಟನೆಯಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

 

Find Out More:

Related Articles: